Ashwaveega News 24×7 ಫೆಬ್ರವರಿ 14 -2026 – ಚಿಕ್ಕಬಳ್ಳಾಪುರ: ಮನೆ ತೆರವು ವಿಚಾರವಾಗಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಂಚೇನಹಳ್ಳಿನಲ್ಲಿ ನಡೆದಿದೆ.
ಗಿಡಿಗಾನಹಳ್ಳಿ ನಿವಾಸಿ ರಾಮಕೃಷ್ಣ ಎಂಬವರು ತಮ್ಮ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿದ್ದು, ಅದನ್ನು ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡಿದ್ದಾರೆ . ಈ ಸಂಬಂಧ ಮಂಚೇನಹಳ್ಳಿ ತಹಶೀಲ್ದಾರ್ ಕಚೇರಿಯ ತಹಶೀಲ್ದಾರ್ ಪೂರ್ಣಿಮಾ ಅವರ ಮೇಲೆ ಆರೋಪ ಮಾಡಲಾಗಿದೆ.
“ಸಾಲ ಮಾಡಿ ಮನೆ ಕಟ್ಟಿದ್ದೇನೆ. ಅಧಿಕಾರಿಗಳ ಮುಂದೆ ಮನೆ ಉಳಿಯುವುದು ಕಷ್ಟವಾಗಿದೆ. ಜಾಗ ಕೊಡದಿದ್ದರೆ ಕರೆಂಟ್ಗೆ ಕೊಟ್ಟು ಸುಡಬೇಕು” ಎಂದು ಡೆತ್ನೋಟ್ನಲ್ಲಿ ಬರೆದಿರುವುದಾಗಿ ತಿಳಿದುಬಂದಿದೆ. ಮನೆ ಪಕ್ಕದಲ್ಲೇ ತಮ್ಮ ಸಮಾಧಿ ಮಾಡಬೇಕು ಎಂದು ಕೂಡ ಮನವಿ ಮಾಡಿರುವುದು ವರದಿಯಾಗಿದೆ.
ನೋಟಿಸ್ ನೀಡದೇ ಬೆಸ್ಕಾಂ ಸಂಪರ್ಕ ಕಡಿತಗೊಳಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಬೆಳವಣಿಗೆಗಳ ಹಿನ್ನೆಲೆ ಸಿಕ್ಕಸಿಕ್ಕ ಮಾತ್ರೆಗಳು ಸೇವಿಸಿ ರಾಮಕೃಷ್ಣ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಚಿಕ್ಕಬಳ್ಳಾಪುರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮನೆ ತೆರವು ಮತ್ತು ಆಡಳಿತ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
