
ಗದಗ: ಗದಗ ನಗರದಲ್ಲಿನ ದತ್ತಾತ್ರೆಯ ರಸ್ತೆಯಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ.1 ಆವರಣವು ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡಿದೆ. ಈ ಶಾಲೆಯ 1ರಿಂದ 7ನೇ ತರಗತಿಯ ವಿದ್ಯಾರ್ಥಿಗಳು, ತಮ್ಮ ಶಾಲಾ ಕೊಠಡಿಗಳಿಗೆ ತೆರಳುವ ಬದಲು, ರಸ್ತೆ ಪಕ್ಕದಲ್ಲೇ ಬಿದ್ದ ಕಾಂಪ್ಲೆಕ್ಸ್ನ ಕಟ್ಟೆಯಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿ ಎದುರಿಸಿದರು.
ಪ್ರತಿ ಬಾರಿ ಭಾರಿ ಮಳೆಯಾದಾಗ ಈ ರೀತಿಯ ಪರಿಸ್ಥಿತಿ ಎದುರಾಗುತ್ತದೆ ಎಂದು ಆಕ್ರೋಶ ವ್ಯಕ್ತವಾಗಿದೆ. ನಗರದ ಚರಂಡಿ ನಿರ್ವಹಣೆ ಸರಿಯಾಗಿ ಇಲ್ಲದಿರುವುದರಿಂದ, ನಗರಸಭೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಾಧ್ಯಮದವರ ಹಾಜರಾತಿ ಗಮನಿಸಿ, ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳು, ಜೆಸಿಬಿ ಸಹಿತ ಕಾರ್ಯಾಚರಣೆ ಆರಂಭಿಸಿದ್ದಾರೆ.
ಚರಂಡಿ ಸ್ವಚ್ಚತೆ ಕಾರ್ಯವನ್ನು ಮಾಡುತ್ತಿದ್ದರೂ, ಮಕ್ಕಳಿಗೆ ಇದು ಶಾಶ್ವತ ಪರಿಹಾರವಾಗಲಾರದು. ಗದಗ ಶಹರ ಬಿಇಓ ಆರ್ ಎಸ್ ಬುರುಡಿ ಸ್ಥಳಕ್ಕೆ ಭೇಟಿ ನೀಡಿ, ಮಕ್ಕಳನ್ನು ಪಕ್ಕದ ಶಾಲೆಗೆ ಸ್ಥಳಾಂತರಿಸುವ ಕ್ರಮ ಕೈಗೊಂಡಿದ್ದಾರೆ.