
ಜಿಗಣಿ ಪೊಲೀಸರು ಖತರ್ನಾಕ್ ಮನೆಗಳ್ಳನನ್ನು ಅರೆಸ್ಟ್ ಮಾಡಿದ್ದಾರೆ. ಆನೇಕಲ್ ತಾಲ್ಲೂಕಿನ ಜಿಗಣಿ ಮತ್ತು ಸರ್ಜಾಪುರದ ಚಿಕ್ಕದಾಸರಹಳ್ಳಿಯ ವಾಸಿ ಲಕ್ಷ್ಮಣ್ @ಗುನ್ನಿ ಅರೆಸ್ಟ್ ಗೊಂಡಿದ್ದು, ಆರೋಪಿಯಿಂದ 8 ಲಕ್ಷ ಮೌಲ್ಯದ 101 ಗ್ರಾಂ ಚಿನ್ನಾಭರಣ ಜಫ್ತಿ ಮಾಡಲಾಗಿದೆ.
ಕೈಯಲ್ಲಿ ಯಾವುದೇ ಕೆಲಸವಿಲ್ಲದಿದ್ದರೂ, ಶುಭ್ರ ಜೀವನವನ್ನು ನಿರ್ವಹಿಸಲು ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಕರೆದುಕೊಂಡು ಹೋಗಲು ಮನೆಗಳಿಗೆ ಕನ್ನ ಹಾಕುತ್ತಿದ್ದ. ಜಿಗಣಿಯ ಗೋಪಾಲಸ್ವಾಮಿಯವರ ಮನೆಗೆ ಬೆಳ್ಳಂಬೆಳಗ್ಗೆ ಬಾಗಿಲು ಮುರಿದು ನಗನಾಣ್ಯ ದೋಚಿ ಪರಾರಿಯಾಗಿದ್ದ.
ಜಿಗಣಿ, ಬನ್ನೇರುಘಟ್ಟ, ಅತ್ತಿಬೆಲೆ, ಸೂರ್ಯನಗರ ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದ ಈ ಆರೋಪಿ, 23 ಮನೆಗಳವು ಪ್ರಕರಣಗಳಲ್ಲಿ ಬೇಕಾಗಿದ್ದು, ಈ ಹಿಂದೆಯೂ ಹಲವಾರು ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಬಂದಿದ್ದ.
ಈಗ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿರುವ ಪೊಲೀಸರು ಆರೋಪಿಯನ್ನ ಹತ್ತಿರದಿಂದ ಅವಲೋಕಿಸುತ್ತಿದ್ದಾರೆ.