
ಚಾಮರಾಜನಗರ:
ಬಂಡಿಪುರ ಕಾಡಂಚಿನ ಒಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಯಿಂದ ಎರಡು ಹಸುಗಳು ಬಲಿ ಆದ ದುರ್ಘಟನೆ ನಡೆದಿದೆ. ಸ್ಥಳೀಯ ರೈತ ರವೀಶ್ ಅವರಿಗೆ ಸೇರಿದ ಹಸುಗಳು ಜಮೀನಿನಲ್ಲಿ ಮೇಯುತ್ತಿದ್ದಾಗ ದಾಳಿ ನಡೆದಿದೆ. ಮೂರು ಹಸುಗಳ ಮೇಲೆ ದಾಳಿ ನಡೆದಿದ್ದು, ಅದರಲ್ಲಿ ಎರಡು ಸ್ಥಳದಲ್ಲಿಯೇ ಮೃತಪಟ್ಟಿವೆ. ಇನ್ನೊಂದು ಹಸು ಚಿಂತಾಜನಕ ಸ್ಥಿತಿಯಲ್ಲಿದೆ.
ಇತ್ತೀಚಿನ ದಿನಗಳಲ್ಲಿ ಹುಲಿ, ಆನೆ, ಕಾಡು ಹಂದಿ ಸೇರಿದಂತೆ ಹಲವು ಕಾಡು ಪ್ರಾಣಿಗಳ ದಾಳಿಯಿಂದ ಗ್ರಾಮದ ಜನರು ಬೇಸತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರ ನೀಡಲು ಸಂತ್ರಸ್ತರು ಒತ್ತಾಯ ಮಾಡಿದ್ದಾರೆ.


