
ದಕ್ಷಿಣ ಕನ್ನಡ : ಕೆಜಿಎಫ್ ಸಿನಿಮಾದ ಬಳಿಕ ಬಾಲಿವುಡ್ ನಟ ಸಂಜಯ್ ದತ್ ಗೆ ಅದೃಷ್ಟ ಖುಲಾಯಿಸಿದ್ದು, ಕೆಜಿಎಫ್ ಬಳಿಕ ಸಂಜಯ್ ತಮಿಳು, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ತನ್ನ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿರುವ ಇವರು, ಕಳೆದ ಕೆಲ ವರ್ಷಗಳಿಂದ ಧಾರ್ಮಿಕತೆಯತ್ತ ಮುಖ ಮಾಡಿದ್ದರು, ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಕರ್ನಾಟಕದ ಪ್ರಸಿದ್ಧ ದೇವಾಲಯವಾದ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೂ ಸಂಜಯ್ ದತ್ ಅವರು ಕೆಲವು ಗೆಳೆಯರೊಟ್ಟಿಗೆ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಬಂದಿದ್ದು, ಹುಲಿ ಕುಣಿತದ ಊದು ಪೂಜೆ ಯಲ್ಲಿ ಭಾಗವಹಿದರು. ಈ ಪೂಜೆಯಲ್ಲಿ ಪಾಲ್ಗೊಳ್ಳಲೆಂದು ಸಂಜಯ್ ದತ್ ಅವರು ಮುಂಬೈನಿಂದ ಮಂಗಳೂರಿಗೆ ಬಂದಿದ್ದರು. ಬಿರುವೆರ್ ಕುಡ್ಲ ಸಂಘಟನೆಯ ಹುಲಿವೇಷ ಕುಣಿತದ ಊದು ಪೂಜೆ ಆಯೋಜಿಸಿದ್ದು, ಈ ವಿಶೇಷ ಪೂಜೆಯಲ್ಲಿ ನಟ ಸಂಜಯ್ ದತ್ ಭಾಗಿಯಾಗಿದ್ದಾರು.
ದೇವಾಲಯಕ್ಕೆ ಆಗಮಿಸಿದ್ದ ಸಂಜಯ್ ದತ್ ಅವರಿಗೆ ದೇವಸ್ಥಾನದ ವತಿಯಿಂದ ವಿಶೇಷ ಗೌರವ ಸಲ್ಲಿಕೆ ಮಾಡಲಾಯ್ತು.ಇದೇ ವೇಳೆ ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಗೌರವಿಸಲಾಯ್ತು. ಇನ್ನೂ ಸಂಜಯ್ ದತ್ ದೇವಾಲಯಕ್ಕೆ ಆಗಮಿಸಿದ ಸುದ್ದಿ ತಿಳಿದು ಹಲವು ಮಂದಿ ಅವರನ್ನು ನೋಡಲು ಬಂದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿ ಬಿದ್ದರು.
ಇದನ್ನೂ ಓದಿ : https://ashwaveega.com/here-are-some-interesting-facts-you-may-not-know-about-the-significance-of-kartika-month/