
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶಂಭೂವಿನಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳ್ಳಗೆ ಗನ್ ಸೌಂಡ್ ಕೇಳಿಸಿದ್ದು, ಆದ್ರೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಲ್ಲ, ಪತ್ನಿ ಜೊತೆ ಆಕ್ರಮ ಸಂಬಂಧ ಆರೋಪ ಹಿನ್ನಲೆ ಗನ್ ನಿಂದ ಗುಂಡು ಹಾರಿಸಿ ಯುವಕನ ಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಂಜು(26) ಗುಂಡೇಟು ದಾಳಿಯಿಂದ ಗಾಯಗೊಂಡ ಯುವಕನಾಗಿದ್ದು, ಶಿವರಾಜು(37) ಗುಂಡು ಹಾರಿಸಿದ ಆರೋಪಿಯಾಗಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ಈ ಘಟನೆ ನಡೆದಿದ್ದು, ಪ್ರಾಣಾಪಾಯದಿಂದ ಯುವಕ ಪಾರಾಗಿದ್ದಾನೆ. ಮುಂಬೈನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜು ವಾರದ ಹಿಂದೆ ಗ್ರಾಮಕ್ಕೆ ಬಂದಿದ್ದ.
ಲಾರಿ ಡ್ರೈವರ್ ಕೆಲಸ ಮಾಡುತ್ತಿದ್ದ ಮಂಜು ಜೊತೆಗೆ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂದು ಫೈರಿಂಗ್ ಮಾಡಿದ್ದಾನೆ. ಸದ್ಯ ಗಾಯಾಳು ಮಂಜುಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಂಡವಪುರ ಪೊಲೀಸರು ಆರೋಪಿ ಶಿವರಾಜ್ ನನ್ನು ಬಂಧಿಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : https://ashwaveega.com/the-death-of-a-government-hospital-doctor/