
ಬೆಂಗಳೂರು : ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ.
ನೆನ್ನೆ ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಗೆ ಈ ಘಟನೆ ನಡೆದಿದ್ದು, ಸುಹಾಸ್ ಗೌಡ ಎಂಬ ಬಾಲಕ ಮೃತ ಪಟ್ಟಿದ್ದಾನೆ. ಇನ್ನೂ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಆದರೆ ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ ಸಿಬ್ಬಂದಿ ಯಾವುದೇ ಮುನ್ನೆಚ್ಚರಿಕೆ ವಹಿಸಿರದ ಕಾರಣ ಸುಹಾಸ್ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.