
ದಾವಣಗೆರೆ : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ತರುಣ್ ಬಂಧಿತ ಬಾಲಕ ಗೋಯಲ್ ಅಪಹರಣಕ್ಕೊಳಗಾದ ಮಗು. ಬೆಂಗಳೂರಿನಲ್ಲಿ ಅಕ್ಕ ವ್ಯಕ್ತಿಯೊಬ್ಬನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಅವನೊಂದಿಗೆ ವಾಸಿಸುತ್ತಿದ್ದಳು. ಈ ವಿಚಾರ ತಮ್ಮನಿಗೆ ಗೊತ್ತಾಗಿದೆ. ಅಕ್ರಮ ಸಂಬಂಧ ಬಿಡುವಂತೆ ಹೇಳಿದ್ದ. ಆದರೆ ತಮ್ಮನ ಮಾತಿಗೆ ಕಿವಿಗೊಡದೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದರು ಎನ್ನಲಾಗಿದೆ. ಇದರಿಂದ ಅಕ್ಕನ ನಡೆ ಬಗ್ಗೆ ಬೇಸತ್ತು ಬಾಲಕ ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ಪರಾರಿಯಾಗಿದ್ದಾನೆ.
ಮಗುವಿನ ತಾಯಿ ಆತಂಕಗೊಂಡು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಬೆಂಗಳೂರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಮಗುವಿನೊಂದಿಗೆ ಬಾಲಕ ನಿಜಾಮುದ್ದೀನ್ ಎಕ್ಸ್ಪ್ರೆಸ್ ಟ್ರೈನ್ನಲ್ಲಿ ಪ್ರಯಾಣಿಸುತ್ತಿರುವ ವಿಚಾರ ಗೊತ್ತಾಗಿದ್ದು, ತಕ್ಷಣ ಬೆಂಗಳೂರು ಪೊಲೀಸರು ಅಲ್ಲಿಂದ ದಾವಣಗೆರೆ ರೈಲ್ವೆ ಆರ್ಪಿಎಫ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇತ್ತ ದಾವಣಗೆರೆಯಲ್ಲಿ ಇನ್ಸ್ಪೆಕ್ಟರ್ ಎಕೆ ರೆಡ್ಡಿ ಹಾಗೂ ಸಿಬ್ಬಂದಿ ಶಿವಾನಂದ, ಅಮಿತ್, ಬಿಂದು ಮಾಧುರಿ ಚುರುಕಾಗಿದ್ದಾರೆ. ದಾವಣಗೆರೆಗೆ ನಿಜಾಮುದ್ದಿನ್ ಎಕ್ಸ್ಪ್ರೆಸ್ ಟ್ರೈನ್ ಬರುತ್ತಿದ್ದಂತೆ ಪೊಲೀಸರು ಪ್ರಯಾಣಿಕರ ತಪಾಸಣೆ ನಡೆಸಿದ್ದು, ಟ್ರೈನ್ನಿಂದ ಮಗುವಿನೊಂದಿಗೆ ಕೆಳಗಿಳಿಯುತ್ತಿದ್ದಂತೆ ಪೊಲೀಸರು ಬಾಲಕ ಮತ್ತು ಮಗುವಿನ ರಕ್ಷಣೆ ಮಾಡಿದ್ದಾರೆ.