
ತುಮಕೂರು: ಹುಡುಗಿ ವಿಚಾರಕ್ಕೆ ಅಂಗಡಿಗೆ ನುಗ್ಗಿ ಹಲ್ಲೆ ಮಾಡಿದ್ದು, ಗೃಹ ಸಚಿವರ ತವರಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ಹುಡುಗಿ ವಿಚಾರವಾಗಿಯೇ ಸದಾಶಿವನಗರದಲ್ಲಿನ ಸಮೋಸ ಸೆಂಟರ್ಗೆ ನುಗ್ಗಿ 22 ವರ್ಷದ ಹಸೇನ್ ಎನ್ನುತ್ತ, ಇಸ್ಮಾಯಿಲ್ ನಗರದ ಆಯುಬ್ ಮೇಲೆ ಲಾಂಗ್ನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೋಳಗಾದ ಆಯುಬ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತಿಚೆಗೆ ಹುಡುಗಿ ವಿಚಾರಕ್ಕೆನೇ ಅದೇ ರಸ್ತೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಮೇಲಿಂದ ಮೇಲೆ ಇಂತಹ ಅಮಾನವೀಯ ಕೃತ್ಯಗಳು ನಡೆಯುತ್ತಿರುವುದರಿಂದ ನಗರದ ಜನರಲ್ಲಿ ಭೀತಿ ಹೆಚ್ಚಾಗಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೂ ನಗರದಲ್ಲಿ ಪೊಲೀಸರು ಎಚ್ಚೆತ್ತುಕೊಂಡಿಲ್ಲ, ಸಮರ್ಪಕವಾಗಿ ಪೊಲೀಸರು ಗಸ್ತು ತಿರುಗುತ್ತಿಲ್ಲ. ತುಮಕೂರು ನಗರದಲ್ಲಿ ಪುಂಡರಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.