
ನಿಗದಿಗಿಂತ ಮೊದಲೇ ಸಚಿವ ಸಂಪುಟ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಲು ನಿರ್ಧಾರ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದಕೊಳ್ಳಲಿದೆ. ಈ ಹಿಂದೆ ಜ.30 ರಂದು ಸಚಿವ ಸಂಪುಟ ನಡೆಸಲು ಚಿಂತನೆ ನಡೆಸಲಾಗಿತ್ತು. ಅಲ್ಲದೇ ಜ.27ರಂದು ಹೈ ಕೋರ್ಟ್ನಲ್ಲಿ ಸಿಎಂ ವಿರುದ್ದದ ಮುಡಾ ಹಗರಣ ಆರೋಪದ ವಿಚಾರಣೆಯೂ ಇದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯುವುದ್ದರಿಂದ ಆ ದಿನ ಸಿದ್ದರಾಮಯ್ಯಗೆ ಆ ದಿನ ಅತ್ಯಂತ ಮಹತ್ವದ್ದಾಗಿದೆ. ಅಲ್ಲದೇ ರಾಜ್ಯ ಸರ್ಕಾರ ಮತ್ತು ಅರಮನೆ ವಿಚಾರದ ಜಟಾಪಟಿ ನಡೆಯುತ್ತಿದ್ದು ಇಂದಿನ ಸಭೆಯಲ್ಲಿ ಅರಮನೆ ಭೂಮಿಗೆ ಟಿಡಿಆರ್ ನೀಡುವ ಸಂಬಂಧ ಸುಪ್ರಿಂಕೋರ್ಟ್ಗೆ ಅಫಿಡವಿಟ್ ಸಲ್ಲಿಸುವ ಚರ್ಚೆ ನಡೆಸುವ ಸಾಧ್ಯೆತೆಯಿದೆ ಎನ್ನಲಾಗುತ್ತಿದೆ.