
ರಸ್ತೆ ಅಪಘಾತದಲ್ಲಿ ತೀವ್ರ ಗಾಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 13 ದಿನಗಳ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಲೇ ಮಾತನಾಡಿದ ಸಚಿವೆ ತಮ್ಮ ಆರೋಗ್ಯಕ್ಕೆ ಹಾರೈಸಿದ ಎಲ್ಲಾರಿಗೂ ಧನ್ಯವಾದ ಹೇಳಿದ್ದಾರೆ. ಜೊತೆಗೆ ರಸ್ತೆ ಅಫಘಾತದಲ್ಲಿ ನಾನು ಬದುಕಿದ್ದು ನನಗೆ ಇದು ಪುನರ್ಜನ್ಮ ಆಗಿದೆ. ಸದ್ಯಕ್ಕೆ ವೈದ್ಯರು 3 ವಾರಗಳ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಬಜೆಟ್ ಬೇರೆ ಇದೆ ಹೀಗಾಗಿ ನನ್ನ ಜವಾಬ್ದಾರಿ ನಿಭಾಯಿಸಬೇಕಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರ ಆರೋಪಕ್ಕೂ ಅಸಮಾಧಾನಗೊಂಡ ಸಚಿವೆ ಕಲ್ಲು ಹೃದಯದವರು ಏನು ಬೇಕಾದ್ರೂ ಸಹ ಮಾತನಾಡ್ತಾರೆ, ಸಾವಿನಲ್ಲೂ ರಾಜಕೀಯ ಮಾಡ್ತಾರೆ ಅದರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಸಚಿವೆ ಹೇಳಿದ್ದಾರೆ.
