
ತಮ್ಮ ಸುಮಧುರ ಕಂಠದಿಂದ ಸರಿಗಮಪ ಕಾರ್ಯಕ್ರಮದಲ್ಲಿ ಭಾಗವಹಿಸಿ, ಇಡೀ ರಾಜ್ಯದ ಜನರ ಮನೆಮಾತಾಗಿದ್ದ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ.

ದೇವಸ್ಥಾನವೊಂದರ ಮುಂದೆ ಅಂಧ ಸಹೋದರಿಯರಾದ ಮಂಜಮ್ಮ–ರತ್ನಮ್ಮ ಅವರು ಹಾಡುತ್ತಿದ್ದರು. ಬಳಿಕ ʼಸರಿಗಮಪʼ ಶೋನಲ್ಲಿ ಭಾಗಿಯಾದ ಬಳಿಕ ಇಬ್ಬರೂ ಜನಪ್ರಿಯತೆ ಪಡೆದುಕೊಂಡಿದ್ದರು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ. ಇಬ್ಬರೂ ಅಕ್ಕ-ತಂಗಿ ಹುಟ್ಟಿನಿಂದ ಇಬ್ಬರಿಗೂ ಕಣ್ಣಿಲ್ಲ . ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಂಗೀತ ಕಲಿತಿಲ್ಲ. ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದವರಾಗಿದ್ದರು. ಅದೇ ಅವರ ವೃತ್ತಿಯೂ ಆಗಿತ್ತು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.
ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ ಹಾಗೂ ತಂಗಿ ರತ್ನಮ್ಮ ಹುಟ್ಟು ಅಂಧರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಹಾಡು ಹಾಡಿ ಭಕ್ತಾದಿಗಳು ಕೊಟ್ಟ ಹಣದಿಂದ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದರು. ಇವರ ಪ್ರತಿಭೆ ಗುರುತಿಸಿ ಝೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗಿತ್ತು. 2019ರಲ್ಲಿ ನಟ ಜಗ್ಗೇಶ್ ತಮ್ಮ ಸ್ವಂತ ಹಣದಿಂದ ಅವರಿಗಾಗಿ ಮನೆಯ ನಿರ್ಮಾಣ ಮಾಡಿಕೊಟ್ಟಿದ್ದರು. ಇನ್ನೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಮಂಜಮ್ಮ ಹಾಗೂ ರತ್ನಮ್ಮ ಅವರಿಗೆ ಪ್ರತಿ ತಿಂಗಳು ಆಹಾರ ಪದಾರ್ಥಗಳನ್ನು ಕಳುಹಿಸಿಕೊಡುವ ಮೂಲಕ ನೆರವಾಗಿದ್ದರು . ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.