
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸೋದರ ಪ್ರತಿಕ್ರಿಯಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಡೆದ ಕ್ರಿಕೆಟ್ ಟೂರ್ನಿಯಲ್ಲಿ ಅತಿಥಿಯಾಗಿ ಹೋಗಿದ್ದ ಸೂರಜ್ ರೇವಣ್ಣ . ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ. ನಾವೆಲ್ಲರೂ ಒಟ್ಟಾಗಿ ಅವರನ್ನು ಸ್ವಾಗತಿಸುತ್ತೇವೆ. ಪ್ರಪಂಚ ಇಲ್ಲಿಗೆ ಮುಗಿದು ಹೋಗಿಲ್ಲ ಮುಂದೆ ರಾಜಕೀಯದಲ್ಲಿ ಏನಾಗುತ್ತದೆ ಎಂದು ನನಗೆ ಚೆನ್ನಾಗಿ ತಿಳಿದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಹೇಳಿಕೆ ಮುಖಾಂತರ ಸೂರಜ್ ರೇವಣ್ಣ ಕಾಂಗ್ರೆಸ್ ಸರ್ಕಾರ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಜೊತೆಗೆ ಮುಂದಿನ 4-5 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ಅಧಿಕಾರದಲ್ಲಿರುವವರೆಲ್ಲರೂ ಜೈಲು ಪಾಲಾಗಲಿದ್ದಾರೆ ಎಂದು ಸೂರಜ್ ರೇವಣ್ಣ ಭವಿಷ್ಯ ನುಡಿದಿದ್ದಾರೆ.

ಅಭಿಷೇಕ್. ಎಸ್