
ED summons D K Suresh in Aishwarya Gowda 'fraud' case
ಐಶ್ವರ್ಯ ಗೌಡ ಪ್ರಕರಣದ ತನಿಖೆಯು ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಸಂಸದ ಡಿ.ಕೆ. ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿದೆ.
ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿಕೆ ಸುರೇಶ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.
ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ಅವರು, ನಮ್ಮ ಬ್ರದರ್ ನಮ್ಮ ಹೆಸರು ಮಿಸ್ ಯ್ಯೂಸ್ ಆಗ್ತಿದೆ ಅಂತ ಹೇಳಿದ್ರು. ಇದರ ಇನ್ವೆಸ್ಟಿಗೇಷನ್ ಆಗಬೇಕು ಅಂತ ರಿಕ್ವೆಸ್ಟ್ ಲೆಟರ್ ಕೊಟ್ಟಿದ್ದಾರೆ.
ಪೊಲೀಸನವರಿಗೆ ಕಂಪ್ಲೈಂಟ್ ಕೂಡ ಕೊಟ್ಟಿದ್ದಾರೆ. ಮ್ಮ ಬ್ರದರ್ ಇಡಿಗೆ ಹೋಗಿ ಕೋಆಪರೇಟ್ ಮಾಡುತ್ತಾರೆ. ಮೋಸ ಮಾಡ್ತಿದ್ದಾರೆ, ಇದಾಗಲೇ ಮೂರ್ನಾಲ್ಕು ಜನರಿಗೆ ಮೋಸ ಆಗಿದೆ. ಹೆಸರು ಹೇಳಿ, ಸಿಸ್ಟರ್ ಅಂತ ಹೇಳಿದ್ದಾರೆ. ಅದರ ತನಿಖೆ ಆಗಬೇಕು ಅಂತಲೂ ಹೇಳಿದ್ದೇವೆ. ನಾವು ಇಡಿಗೆ ಸಹಕಾರ ಕೊಡಲು ರೆಡಿಯಿದ್ದೇವೆ. ನಾವು ಈ ದೇಶದ ಕಾನೂನಿಗೆ ಗೌರವ ಕೊಡುತ್ತೇವೆ. ವಿಚಾರಣೆ ಸಹಕಾರ ಕೊಡುತ್ತೇವೆ. ಸಮಾಜಕ್ಕೆ ಮೋಸ ಮಾಡುವ ಜನರ ವಿರುದ್ಧ ಕ್ರಮಕ್ಕೆ ಸಹಕಾರ ನೀಡಲು ಬದ್ಧರಾಗಿದ್ದೇವೆ. ಜನರಿಗೆ ನ್ಯಾಯ ಒದಗಿಸೋದು ನಮ್ಮಕರ್ತವ್ಯ. ಆ ಕೆಲಸ ಡಿಕೆ ಸುರೇಶ್, ಡಿಕೆ ಶಿವಕುಮಾರ್ ಮಾಡ್ತಾರೆ ಎಂದಿದ್ದಾರೆ.