
ಬಳ್ಳಾರಿ : ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರು ದಿನದಿಂದ ದಿನಕ್ಕೆ ಬೆನ್ನು ನೋವಿನಿಂದ ಬಳಲುತ್ತಿದ್ದು, ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗಾಗಿ ಜೈಲಿಗೆ ಮೆಡಿಕಲ್ ಬೆಡ್, ದಿಂಬು ಎಲ್ಲಾ ಬಂದಿದೆ.
ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ 4 ತಿಂಗಳೇ ಕಳೆದು ಹೋಗಿದ್ದು, ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ದರ್ಶನ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ನಟ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ದರ್ಶನ್ ಗೆ ಹೊಸ ಕಾಟ್, ಬೆಡ್ ಹಾಗೂ ದಿಂಬು ಜೈಲಿಗೆ ಬಂದಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಪರೀಕ್ಷೆ ಮಾಡಿದ್ದರು. ನಿನ್ನೆ ಜೈಲಾಧಿಕಾರಿಗಳಿಗೆ ಮೆಡಿಕಲ್ ವರದಿ ಸಲ್ಲಿಕೆ ಮಾಡಿದ್ದಾರೆ. ಈ ಮೆಡಿಕಲ್ ರಿಪೋರ್ಟ್ನ ಮೇಲಾಧಿಕಾರಿಗಳೊಂದಿಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದರು.
ಇನ್ನೂ ಹೊರಗೆ ಐಷಾರಾಮಿ ಜೀವನ ನಡೆಸಿದ್ದ ನಟ ದರ್ಶನ್ ಜೈಲು ನರಕ ದರ್ಶನ ಮಾಡಿಸಿದ್ದು, ಚಿಕ್ಕ ರೂಮಿನಲ್ಲಿ ಚಾಪೆ ಮೇಲೆ ಮಲಗಲು ಆಗದೆ ದರ್ಶನ್ ಒದ್ದಾಡುತ್ತಿದ್ದಾರೆ. ಮೊದಲೇ ಕೈ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್ಗೆ ಇದೀಗ ಕೂರೋಕು, ಏಳೋಕು ಕಷ್ಟವಾಗ್ತಿದೆ ಎನ್ನಲಾಗ್ತಿದೆ.
ದರ್ಶನ್ ಅವರ ತಪಾಸಣೆ ನಡೆಸಿದ ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ಬೆಡ್ & ದಿಂಬು ನೀಡುವಂತೆ ವರದಿಯಲ್ಲಿ ಉಲ್ಲೇಖ ಮಾಡಿದ್ದರು. ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಿಂದ ಬೆಡ್ & ದಿಂಬು ರವಾನೆ ಮಾಡಲಾಗಿದೆ. ಇದೇ ವೇಳೆ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ಬೆಡ್ & ದಿಂಬ ಅನ್ನು ತರಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ದರ್ಶನ್ ಇರುವ ಬ್ಯಾರೆಕ್ಗೆ ಶಿಫ್ಟ್ ಮಾಡಿದ್ದಾರೆ.
ಇದನ್ನೂ ಓದಿ : https://ashwaveega.com/heavy-rain-in-the-hilly-parts-caused-the-water-level-to-fall/