
ನವರಾತ್ರಿಯ 9ನೇ ದಿನ ಮುಗಿದು ಇಂದು (ಅ.11) ಆಯುಧ ಪೂಜೆ ನಡೆಯುತಿದ್ದು, ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಆಯುಧ ಪೂಜೆ ದಿನದಂದೇ ಯದುವಂಶಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ.ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ.
ಯುವರಾಣಿ ತ್ರಿಷಿಕಾಗೆ ಗಂಡು ಮಗು ಜನನವಾಗಿದ್ದು, ಮೈಸೂರು ನಗರದ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೆಡೆ ಅರಮನೆಯಲ್ಲಿ ಸಂಭ್ರಮದ ವಾತಾವರಣವಿದ್ದು, ಮತ್ತೊಂದೆಡೆ ಸೂತಕದ ಹಿನ್ನಲೆ ಪೂಜಾ ಕೈಂಕರ್ಯಗಳಿಗೆ ಅಡ್ಡಿಯಾಗಲಿದೆಯೇ ಎಂಬ ಪ್ರಶ್ನೆ.? ಉಂಟಾಗಿದೆ.
ಈಗಾಗಲೇ ಯದುವೀರ್ ರವರು ಕಂಕಣ ತೊಟ್ಟಿದ್ದು, ಮಗು ಹುಟ್ಟಿದಾಗ ಸಂಪ್ರದಾಯವಾಗಿ ಸೂತಕ ಆಚರಿಸುವ ವಾಡಿಕೆ ಇದೆ. ಈಗ ಅರಮನೆಯಲ್ಲಿ ಹೇಗೆ ಪೂಜಾ ಕೈಂಕರ್ಯಗಳು ನಡೆಯುತ್ತದೆ ಎಂಬ ಅಂಶ ಸದ್ಯ ಕುತೂಹಲ ಮೂಡಿಸಿದ್ದು, ಪೂಜಾ ವಿಧಿವಿಧಾನಗಳನ್ನ ಮುಂದುವರೆಸುವ ಬಗ್ಗೆ ಅರಮನೆ ಪುರೋಹಿತರ ಜೊತೆ ಚರ್ಚಿಸಿ ತೀರ್ಮಾನ ಪಡೆಯುವುದಾಗಿ ಅರಮನೆ ಮೂಲಗಳಿಂದ ಮಾಹಿತಿ ದೊರೆತ್ತಿದೆ.
ಇದನ್ನೂ ಓದಿ : https://ashwaveega.com/this-fruit-is-very-beneficial-to-prevent-kidney-stone/