
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್, ಬೇಲ್ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ.
ಇದರ ಬೆನ್ನಲ್ಲೇ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ನಟನಿಗೆ ಜೈಲಿನಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಇದೀಗ ಎಂಆರ್ಐ ಸ್ಕ್ಯಾನ್ ಮಾಡಿಸಲು ದರ್ಶನ್ನ್ನು ಬಳ್ಳಾರಿ ಬಿಮ್ಸ್ಗೆ ಶಿಫ್ಟ್ ಮಾಡಲಾಗಿದ್ದು, ಎಂಆರ್ ಐ ಸ್ಕ್ಯಾನ್ ಮಾಡಿಸಲು ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಗಡೇದ್ ಹಾಗೂ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಭಿಮಾನಿಗಳು ಆ್ಯಂಬುಲೆನ್ಸ್ಗೆ ಅಡ್ಡ ಬಂದ ಕಾರಣ ಪೊಲೀಸ್ ಭದ್ರತೆ ನೀಡಲಾಗಿದೆ.