
ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಹೌದು ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿದ ಯೋಗೇಶ್ವರ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಸಿ.ಪಿ ಯೋಗೇಶ್ವರ್ ಜೊತೆ ಸಚಿವರಾದ ರಾಮಲಿಂಗಾ ರೆಡ್ಡಿ, ಚಲುವರಾಯ ಸ್ವಾಮಿ ಹಾಗೂ ಡಿಕೆ ಸುರೇಶ್, ಹೆಚ್.ಎಂ ರೇವಣ್ಣ ಸೇರಿದಂತೆ ಕಾಂಗ್ರೆಸ್ನ ಇತರೆ ನಾಯಕರು ಹಾಜರಿದ್ದು, ಇನ್ನೂ ಜನರು ಕೂಡ ಹೆಚ್ಚಿನ ಮಟ್ಟದಲ್ಲಿ ನಾಮಪತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಉಪ ಚುನಾವಣೆಗೆ ಎನ್ಡಿಎ ಟಿಕೆಟ್ ಕಡೆಗಣಿಸಿದ ಹಿನ್ನೆಲೆಯಲ್ಲಿ ಮಾಜಿ ಎಂ.ಎಲ್ಸಿ ಯೋಗೇಶ್ವರ್ ಅವರು ಅ.23ರಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಿ, ಪಕ್ಷಕ್ಕೂ ಸೇರುವ ಮೊದಲೇ ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಇದರಿಂದ ಕಾಂಗ್ರೆಸ್ನಿಂದ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದರು. ಅದರಂತೆ ಇಂದು ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.