
ಬೆಂಗಳೂರು : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು, ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಇಂದು ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಸಿದ್ದು, ಇಂದು ಕೋರ್ಟ್ಗೆ ದರ್ಶನ್ ಮೆಡಿಕಲ್ ರಿಪೋರ್ಟ್ ಕೂಡ ಸಲ್ಲಿಕೆಯಾಗಿದೆ. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ದರ್ಶನ್ಗೆ ಶಸ್ತ್ರ ಚಿಕಿತ್ಸೆಯ ಅನಿವಾರ್ಯತೆ ಇದೆ. ಹೀಗಾಗಿ ಜಾಮೀನು ನೀಡಬೇಕೆಂಬು ಮನವಿ ಮಾಡಿದ್ದು, ಸರ್ಕಾರದ ಪರ ವಾದ ಮಂಡಿಸಿದ ಎಸ್ಪಿಪಿ ಪ್ರಸನ್ನ ಕುಮಾರ್ ತಮಗೂ ಮೆಡಿಕಲ್ ವರದಿ ನೀಡಲು ಕೋರ್ಟ್ಗೆ ಮನವಿ ಮಾಡಿದ್ದಾರೆ. ಹಾಗೂ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ರು. ಇಬ್ಬರ ವಾದ ವಿವಾದ ಆಲಿಸಿದ ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ.