
ಹಾವೇರಿ : ಶಿಗ್ಗಾವ್ ಸವಣೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಹಿನ್ನೆಲೆ ಶಿಗ್ಗಾವ್ ತಾಲೂಕಿನ ಸುಕ್ಷೇತ್ರಗಳಿಗೆ ಮಾಜಿ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ.
ಇಂದು ಮಗ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಕ್ಷೇತ್ರದ ಹಲವು ದೇವಸ್ಥಾನಗಳಿಗೆ ತಂದೆ ಮಾಜಿ ಸಿಎಂ ಬೊಮ್ಮಾಯಿ ಮೊರೆಹೋಗಿದ್ದಾರೆ. ಇಂದು ಬೆಳಗ್ಗೆಯಿಂದಲೂ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದು,ಅಷ್ಟೇ ಅಲ್ಲಾದೆ ಹುಲಗೂರು ತಡಸ ಸೂಕ್ಷೇತ್ರ ಕಾರಡಗಿ ವೀರಭದ್ರೇಶ್ವರ ದೇವರ ದರ್ಶನ ಪಡೆದುಕೊಂಡಿದ್ದಾರೆ.