
ಕೋಲಾರದಲ್ಲಿ ಮತ್ತೆ ಅರಣ್ಯ ಇಲಾಖೆ ಅಧಿಕಾರಿಗಳು ಪೀಲ್ಡಿಗಿಳಿದಿದ್ದು, ಇಂದು ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋಲಾರ ತಾಲ್ಲೂಕಿನ ಅಚ್ಚಟ್ಟನಹಳ್ಳಿ ಗ್ರಾಮದ ಬಳಿ ನಡೆದ ಈ ಕಾರ್ಯಾಚರಣೆಯಲ್ಲಿ, ಅರಣ್ಯ ಇಲಾಖೆಯ ಸಿಬ್ಬಂದಿ ಜೆಸಿಬಿ ಬಳಸಿ ಅರಣ್ಯ ಒತ್ತುವರಿ ತೆರವು ಮಾಡುತ್ತಿದ್ದಾರೆ.
ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಈ ಗ್ರಾಮದಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶದಲ್ಲಿ ನೂರಾರು ಎಕರೆ ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ, ಡಿಎಫ್ಓ ಏಡುಕೊಂಡಲ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಒತ್ತುವರಿ ತೆರವಿಗೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ, ಆದರೆ ಬಿಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ಮುಂದುವರಿಯುತ್ತಿದೆ.