
ಹರಿಯಾಣ ವಿರುದ್ದ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ರಾಜ್ಯ ತಂಡ ಮೊದಲ ಇನ್ನಿಂಗ್ಸ್ನಲ್ಲಿಯೇ ಹಿನ್ನಡೆ ಅನುಭವಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ ಕರ್ನಾಟಕ 304 ರನ್ಗಳಿಗೆ ಅಲೌಟ್ ಆಗಿತ್ತು. ನಂತರ ಬ್ಯಾಟಿಂಗ್ಗಿಳಿದ ಹರಿಯಾಣ ತಂಡ ನಿಶಾಂತ್ ಸಿಂಧು (165), ಎ ರಾಜೇಶ್ ಕುಮಾರದ (118) ನೆರವಿನಿಂದ ಹರಿಯಾಣ ಮೊದಲ ಇನ್ನಿಂಗ್ಸ್ನಲ್ಲಿ 450 ರನ್ ಗಳಿಸಿ ಒಟ್ಟು 146 ರನ್ಗಳ ಮುನ್ನಡೆ ಸಾಧಿಸಿತ್ತು. ದೊಡ್ಡ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 5 ವಿಕೆಟ್ ಕಳೆದುಕೊಂಡು 153 ರನ್ ಗಳಿಸಿದೆ. ಈ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಹಾಗೂ ದೇವದತ್ ಪಡಿಕ್ಕಲ್ 43 ರನ್ ಗಳಿಸಿ ಔಟಾದರು. ಕರ್ನಾಟಕ ತಂಡ ಇದಾಗಲೇ ಕ್ವಾರ್ಟರ್ ಫೈನಲ್ ರೇಸ್ನಿಂದ ಹೊರಬಿದಿದ್ದೆ. ಕೇರಳ ಹಾಗೂ ಹರಿಯಾಣ ತಂಡಗಳು ಕ್ವಾರ್ಟರ್ ಫೈನಲ್ಗೆ ಹೆಜ್ಜೆ ಇಟ್ಟಿವೆ.
