
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಪರಂ ಪ್ರತಿಕ್ರಿಯೆಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಅಧಿಕಾರಿಗಳು, ಸಚಿವಬರು ಭಾಗಿಯಾಗಿದ್ದಾರೆ ಎಂಬ ಚರ್ಚೆ ನಡೆಯುತ್ತಿರುವಾಗಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇದೇ ವಿಚಾರಕ್ಕೆ ಮಾತನಾಡಿದ್ದಾರೆ. ತನಿಖೆ ಪೂರ್ಣವಾದ ನಂತರ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ. ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಶೀಘ್ರದಲ್ಲೇ ಬಯಲಾಗಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಇನ್ನು ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ತನಿಖೆ ಪ್ರತಿಯೊಂದು ಮಾಹಿತಿ ಬಹಿರಂಗಗೊಳ್ಳಲಿದೆ ಎಂದಿದ್ದಾರೆ. ಇದರ ಜೊತೆಗೆ ಅಧಿಕಾರಿಗಳಿಗೂ ತನಿಖೆಯ ಬಿಸಿ ತಟ್ಟಲಿದ್ದು ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಅಧಿಕಾರಿಗಳ ಪಾತ್ರದ ಬಗ್ಗೆ ಕೂಲಂಕುಶ ತನಿಖೆ ನಡೆಯಲಿದೆ. ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಿಗಳು ತನಿಖೆಯನ್ನು ಎದುರಿಸಲಿದ್ದು ಹಲವು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಲಿದೆ. ಇದಲ್ಲದೇ ವಿಮಾನ ನಿಲ್ದಾಣದ ಅಧಿಕಾರಿಗಳು ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿ ಈಗಾಗಲೇ ಪರಿಶೀಲನೆ ನಡೆಸಲಾಗಿದ್ದು ಪ್ರಕರಣದಲ್ಲಿನ ದೊಡ್ಡ ದೊಡ್ಡ ಹೆಸರುಗಳು ಬೆಳಕಿಗೆ ಬರಬೇಕಿದೆ.

ಅಭಿಷೇಕ್.ಎಸ್