
ಬೆಂಗಳೂರು : ಖ್ಯಾತ ನಟ ಸುದೀಪ್ ಅವರ ತಾಯಿ, ಹಾಗೂ ನನ್ನ ಆತ್ಮೀಯ ಸ್ನೇಹಿತ ಸಂಜೀವ್ ಸರೋವರ ಅವರ ಪತ್ನಿ ಸರೋಜಕ್ಕ ನಿಧನ ಹೊಂದಿರುವುದು ನನಗೆ ಹಾಗೂ ನಮ್ಮ ಕುಟುಂಬಕ್ಕೆ ಅತ್ಯಂತ ದುಃಖ ತಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರೋಜಕ್ಕ ತಾಯಿ ಮಮತೆಯ ಸ್ವರೂಪಿಣಿ ಆಗಿದ್ದು, ಮನೆಗೆ ಬರುವರಿಗೆಲ್ಲ ಆದರತೆ ತೋರುತ್ತಿದ್ದರು. ಅವರು ಸಾಕ್ಷಾತ್ ಅನ್ನಪೂರ್ಣೆಶ್ವರಿಯೇ ಆಗಿದ್ದರು. ಹಲವು ವರ್ಷಗಳ ಕಾಲ ಅವರ ಮನೆಗೆ ಹೋದಾಗೆಲ್ಲ ಊಟ, ಉಪಚಾರ ಮಾಡಿಸಿ ಪ್ರೀತಿಯಿಂದ ಮಾತನಾಡುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಇನ್ನೂ ಸರೋಜ ಅವರ ಅಗಲಿಕೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ. ಈಗ ನಾನು ಅವರ ಮನೆಗೆ ಹೋಗಿ, ಅಂತಿಮ ದರ್ಶನ ಪಡೆಯುತ್ತೇನೆ. ಸುದೀಪ್ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.