
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಬೌಲರ್ ಜಸ್ಪೀತ್ ಬುಮ್ರಾ ಬೆನ್ನು ನೋವಿನಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ . ಹೀಗಾಗಿ ಟೀಂ ಇಂಡಿಯಾ ಜಸ್ಪೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಬೇಕಾಗಿದೆ. ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್ , ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡ ನೆಚ್ಚಿಕೊಂಡಿದೆ. ಜಸ್ಪೀತ್ ಬುಮ್ರಾ ಕಳೆದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದರು.

ಅಂದಿನಿಂದ ಅವರು ಚೇತರಿಕೆ ಹಂತದಲ್ಲಿದ್ದರು. ಜೊತೆಗೆ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುತ್ತಾರೆ ಎಂದೇ ನಿರೀಕ್ಷೆ ಮಾಡಲಾಗಿತ್ತು. ಆದರೆ ಅಂತಿಮವಾಗಿ ಬುಮ್ರಾ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿ ಫೆಬ್ರವರಿ 19ರಿಂದ ಶುರುವಾಗಲಿದ್ದು ಭಾರತ ತಂಡಕ್ಕೆ ಬಾಂಗ್ಲಾದೇಶ ಮೊದಲ ಎದುರಾಳಿಯಾಗಿದೆ..
ಅಭಿಷೇಕ್ ಎಸ್