
ಇತ್ತೀಚೆಗೆ ಸಂಭವಿಸಿದ ರಸ್ತೆ ಅಫಘಾತದಿಂದ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವನ್ನು ಸಿಎಂ ವಿಚಾರಿಸಿದ್ದಾರೆ. ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅನಿಯಾಗುವಂತೆ ಸಚಿವೆಗೆ ಸಿಎಂ ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ. ಸಿಎಂ ಆರೋಗ್ಯ ಭೇಟಿ ವೇಳೆ ಸಚಿವರಾದ ಡಾ. ಜಿ ಪರಮೇಶ್ವರ್ ಹಾಗೂ ಹೆಚ್ ಸಿ ಮಹದೇವಪ್ಪ ಕೂಡ ಉಪಸ್ಥಿತರಿದ್ದು ಸಚಿವೆಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬರುವಾಗ ಅಪಘಾತ ಸಂಭವಿಸಿ ಸಚಿವೆ ಆಸ್ಪತ್ರೆ ಸೇರಿದ್ದರು..