
ಮಡಿಕೇರಿ : ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿದ್ದು, ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದ್ದಾಳೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7:40ರ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಯಿಗಿದ್ದು, ವರ್ಷಕ್ಕೊಮ್ಮೆ ಜರುಗುವ ದೇಶದ ಪವಿತ್ರ ತೀರ್ಥೋದ್ಭವ ಸಂಭ್ರಮ ಇಂದು ನಡೆದಿದ್ದೆ. ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನವಾದಳು.
ಹೌದು ನಿಗದಿಯಂತೆ 7:40ಕ್ಕೆ ಸೂರ್ಯ ಕನ್ಯಾ ಲಗ್ನದಿಂದ ತುಲಾ ಲಗ್ನಕ್ಕೆ ಪ್ರವೇಶಿಸುತ್ತಿದ್ದಂತೆ, ತೀರ್ಥೋದ್ಭವ ನೆರವೇರಿದ್ದು, ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿ, ಮೂರು ಬಾರಿ ಉಕ್ಕಿ ಬಂದಿದ್ದಾಳೆ. ಬಳಿಕ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದ್ದಾರೆ. ಇನ್ನೂ ತೀರ್ಥೋದ್ಭವಕ್ಕೆ ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಆಗಮಿಸಿದ್ದರು.
ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೂ ಮೊದಲು ಒಂದು ಗಂಟೆಯಿಂದ ನಿರಂತರವಾಗಿ ವಿಶೇಷ ಪೂಜಾ ಪುನಸ್ಕಾರಗಳು ನಡೆದಿದ್ದು, ಜೊತೆಗೆ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರ ತಂಡ ಬ್ರಹ್ಮಕುಂಡಿಕೆಯ ಬಳಿ ಕಾವೇರಿ ತೀರ್ಥೋದ್ಭವಕ್ಕೆ ಪೂಜೆ ನಡೆಸಿದರು. ಕಾವೇರಿ ಮಾತೆಯನ್ನು ಆಹ್ವಾನಿಸಲು ವಿವಿಧ ಪೂಜಾ ಕೈಂಕಾರ್ಯಗಳನ್ನು ಅರ್ಚಕರ ತಂಡ ಕೈಗೊಂಡಿತ್ತು.
ರಾಜ್ಯದ ಬೇರೆ ಬೇರೆ ಭಾಗಗಳದ ಮಂಡ್ಯ, ಮೈಸೂರು, ಹಾಸನ ಹಾಗೂ ಬೇರೆ ರಾಜ್ಯಗಳಾದ ತಮಿಳುನಾಡು, ಕೇರಳದಿಂದ ಹೆಚ್ಚು ಸಂಖ್ಯೆಯಲ್ಲಿ ಭಕ್ತರ ಆಗಮಿಸಿದ್ದರು. ಇನ್ನೂ ತೀರ್ಥ ರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಭಕ್ತಗಣ ಕಾತುರದಿಂದ ಕಾದು, ಉಕ್ಕಿ ಬಾ ಕಾವೇರಮ್ಮೆ, ಕಾವೇರಿ ಬಾಳು ಎಂದು ಭಜಿಸುತ್ತಿದ್ದರು. ಬ್ರ್ರಹ್ಮಕುಂಡಿಕೆಯ ಬಳಿ ಸಾವಿರಾರು ಜನ ಭಕ್ತರು ನೆರೆದಿದ್ದು, ಕೊಡವ ಉಡುಪಿನಲ್ಲಿ ಬಂದ ಭಕ್ತರು ದುಡಿಕೊಟ್ಟು ಪಾಟ್ ಬಡಿಯುತ್ತಾ ಕಾವೇರಿ ಸ್ಮರಣೆ ಮಾಡಿದ್ದರು.
ಇದನ್ನೂ ಓದಿ : https://ashwaveega.com/a-boy-died-due-to-torrential-rain-in-haveri/