
ಬಾಗಲಕೋಟೆ : ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ , ಐತಿಹಾಸಿಕ ದೇವಾಲಯಕ್ಕೆ ನೀರು ನುಗ್ಗಿದೆ. ಹೌದು ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಹಿಂಗಾರು ಮಳೆ ಆರಂಭವಾಗಿದ್ದು, ಮಳೆಯ ಆರ್ಭಟ ಜೊರಾಗಿದೆ. ಇದೆ ವೇಳೆ ಬಾದಾಮಿ ಸಮೀಪದ ಇರುವ ಧಾರ್ಮಿಕ ಹಾಗೂ ಐತಿಹಾಸಿಕ ಬನಶಂಕರಿ ದೇವಸ್ಥಾನದ ಪ್ರಾಂಗಣಕ್ಕೆ ನೀರು ನುಗ್ಗಿದೆ.
ಇನ್ನೂ ಬಾಗಲಕೋಟೆ ಜಿಲ್ಲೆ ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಪ್ರಾಂಗಣದಲ್ಲಿ ಅತಿಯಾದ ನೀರು ಬಂದು ಭಕ್ತರ ಸಂಚಾರಕ್ಕೆ ತೊಂದರೆಯಾಗಿದ್ದು, ಪ್ರಾಂಗಣದ ನೀರಲ್ಲಿ ನಡೆದುಕೊಂಡು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಇನ್ನೂ ನೀರು ಹೂರಗೆ ಹಾಕಲು ಆಡಳಿತ ಮಂಡಳಿ ಪ್ರಯತ್ನ ಮಾಡುತ್ತಿದ್ದಾರೆ.
ಇದನ್ನೂ ಓದಿ : https://ashwaveega.com/wall-collapses-due-to-rain-girls-death-is-a-struggle-between-life/