
ಕೇಂದ್ರ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಅಮಿತ್ ಶಾ ಅವರು ತಮಿಳು ನಾಡಿನಿಂದ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ನೆಲಮಂಗಲದಲ್ಲಿ ವಿಶ್ವತೀರ್ಥ ಮಹಾಸ್ವಾಮಿಗಳು ಸ್ಥಾಪಿಸಿದ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಅಮಿತ್ ಶಾ ಅವರು ಯಾವುದೇ ರಾಜಕೀಯ ಕಾರ್ಯಕ್ರಮಕ್ಕಾಗಿ ಇಲ್ಲಿಗೆ ಬರುತ್ತಿಲ್ಲ ಎಂದು ಬಿಜೆಪಿ.ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯಲ್ಲಿ ಜೋರಾಗುತ್ತಿರುವ ಬಣ ಬಡಿದಾಟ ಹಿನ್ನೆಲೆಯಲ್ಲಿ ಅಮಿತ್ ಶಾ ಅವರೇ ಇದಕ್ಕೆ ಬ್ರೇಕ್ ಹಾಕಲು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತಿತ್ತು. ಆದರೆ ಅಮಿತ್ ಶಾ ಅವರ ಕಾರ್ಯಕ್ರಮದ ಬಗ್ಗೆ ಸ್ವತಃ ಬಿ ವೈ ವಿಜಯೇಂದ್ರ ಅವರೇ ಮಾಹಿತಿ ನೀಡಿರುವುದರಿಂದ ಪಕ್ಷದ ಬಣ ಬಡಿದಾಟ ಬಗ್ಗೆ ಚರ್ಚೆ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಅಭಿಷೇಕ್.ಎಸ್